| ಅಮೆರಿಕಾದಲ್ಲಿ ತಾಯಿ ಭಾರತಿಯ ಅಂತರಾಳದ ಮಾತುಗಳನ್ನಾಡಿದ ಯೋಧ..(ಸ್ವಾಮಿ.3) | | ಹಾಗೇ ಸುಮ್ಮನೇ....
| Arun naik ಸಮಯ6/29/2009 5:46 PM | |
| ಸೆಪ್ಟೆಂಬರ್ ಹನ್ನೊಂದು ಅಂತಾದರೂ ಕರೆಯಿರಿ, ೯/೧೧ ಅಂತಾದರೂ ಹೇಳಿ. ಮನಸ್ಸು ಅಮೆರಿಕಾದತ್ತ ಧಾವಿಸಿಬಿಡುತ್ತದೆ. ವಿಶ್ವ ವ್ಯಾಪರ ಕೇಂದ್ರದ ಎರಡು ಕಟ್ಟಡಗಳನ್ನು ಭಯೋತ್ಪಾದಕರು ಉರುಳಿಸಿದ್ದು ಕಣ್ಮುಂದೆ ಅಲೆಅಲೆಯಾಗಿ ತೇಲಿ ಹೋಗುತ್ತದೆ.
ಆದರೆ ಈ ಅಮೆರಿಕಾ ಸೆಪ್ಟೆಂಬರ್ ಹನ್ನೊಂದರಂದೇ ಇನ್ನೊಂದು ಸಾತ್ತ್ವಿಕ ಸುನಾಮಿಗೆ ಸಿಲುಕಿ ಅಲುಗಾಡಿದ್ದು ಬಹುತೆಕರಿಗೆ ಮರೆತೇಹೋಗಿದೆ. ಅವತ್ತು ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ ಸಾಕ್ಷಾತ್ ಅಮೆರಿಕೆಯನ್ನೇ ಧರೆಗೆ ಕೆಡವಿದ್ದರು...
|  | | ಅಭಿಪ್ರಾಯ (0) |
ಮುಂದೆ ಓದಿ... |
|
| ಸ್ವಾಮಿ ವಿವೇಕಾನ0ದರ ಬಗ್ಗೆ (2).. | | ಹಾಗೇ ಸುಮ್ಮನೇ....
| Arun naik ಸಮಯ6/29/2009 5:26 PM | |
| ಸ್ವಾಮಿ ವಿವೇಕಾನ0ದರ ಚಿಕಾಗೊ ಭಾಷಣ.
“ಅಮೆರಿಕದ ಸೋದರಿಯರೇ ಮತ್ತು ಸೋದರರೇ!
ನೀವು ನಮಗೆ ನೀಡಿದ ಉತ್ಸಾಹಯುತ ಆದರದ ಸ್ವಾಗತಕ್ಕೆ ಪ್ರತಿಕ್ರಿಯಿಸಲು ಹೊರಟಾಗ ಅನಿರ್ವಚನೀಯ ಆನಂದವೊಂದು ನನ್ನ ಹೃದಯವನ್ನು ತುಂಬುತ್ತದೆ. ಪ್ರಪಂಚದ ಅತ್ಯಂತ ಪ್ರಾಚೀನವಾದ ಸಂನ್ಯಾಸಿಗಳ ಸಂಘದ ಪರವಾಗಿ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಬೌದ್ಧ ಧರ್ಮ, ಜೈನ ಧರ್ಮಗಳೆರಡೂ ಯಾವುದರ ಶಾಖೆಗಳು ಮಾತ್ರವೋ ಅಂತಹ ಸಕಲ ಧರ್ಮಗಳ ಮಾತೆಯಾದ ಹಿಂದೂ ಧರ್ಮದ ಪರವಾಗಿ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮತ್ತು ವಿವಿಧ ಜಾತಿ ಮತಗಳಿಗೆ ಸೇರಿದ ಕೋತ್ಯಂತರ ಹಿಂದುಗಳ ಪರವಾಗಿ ನಾನು ನಿಮಗೆ ಖ್ರುತಜ್ಞತೆಯನ್ನು ಸಲ್ಲಿಸುತ್ತೇನೆ. ಅಲ್ಲದೆ, ‘ಇಲ್ಲಿ ಕಂಡುಬರುತ್ತಿರುವ ಸಹಿಷ್ಣುತಾಭಾವವನ್ನು ದೂರದೂರದ ದೇಶಗಳಿಂದ ಬಂದಿರುವ ಈ ಪ್ರತಿನಿಧಿಗಳು ತಮ್ಮೊಂದಿಗೆ ಒಯ್ದು ಪ್ರಸಾರ ಮಾಡುತ್ತಾರೆ’ ಎಂದು ಸಾರಿದ ಈ ವೇದಿಕೆಯ ಮೇಲಿನ ಕೆಲವು ಭಾಷಣಕಾರರಿಗೂ ನನ್ನ ಕೃತಜ್ಞತೆಗಳು ಸಲ್ಲುತ್ತವೆ
|  | | ಅಭಿಪ್ರಾಯ (0) |
ಮುಂದೆ ಓದಿ... |
|
|
| ಸ್ವಾಮಿ ವಿವೇಕಾನಂದರ ಬಗ್ಗೆ....(1) | | ಹಾಗೇ ಸುಮ್ಮನೇ....
| Arun naik ಸಮಯ6/19/2009 7:21 PM | |
| ವಿವೇಕಾನಂದರ ಪೂರ್ವಾಶ್ರಮದ ಹೆಸರು ನರೇಂದ್ರನಾಥ ದತ್ತ. ಇವರು ೧೮೬೩ ರಲ್ಲಿ ಕಲಕತ್ತೆಯಲ್ಲಿ ಜನಿಸಿದರು. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ವಿವೇಕಾನಂದ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ಅದ್ವೈತಸಿದ್ಧಾಂತದ ಉಪಯುಕ್ತತೆಯನ್ನು ಬೋಧಿಸಿದರು.ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ಸಹ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಅದ್ವೈತ ಸಿದ್ಧಾಂತ ಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು. ಇದೇ ಅವರ ಮಂತ್ರವಾಯಿತು, ಮತ್ತು ಅವರ "ದರಿದ್ರ ನಾರಾಯಣ ಸೇವೆ' ಎಂಬ ತತ್ತ್ವಕ್ಕೆ ದಾರಿ ಮಾಡಿಕೊಟ್ಟಿತು. ಈ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು. ಎಲ್ಲರಲ್ಲಿಯೂ ದೇವರಿದ್ದು ಎಲ್ಲರೂ ಸಮಾನರೆಂದಾದ ಮೇಲೆ ಕೆಲವರಿಗೆ ಮಾತ್ರ ಏಕೆ ಹೆಚ್ಚು ಬೆಲೆ ಬರಬೇಕು ಎಂಬ ಪ್ರಶ್ನೆಯನ್ನು ವಿವೇಕಾನಂದರು ಕೇಳಿಕೊಂಡರು.....
|  | | ಅಭಿಪ್ರಾಯ (1) |
ಮುಂದೆ ಓದಿ... |
|
|
|
|
|
|
|